ಉಕ್ರೇನ್ ಯುದ್ಧ ಕೈದಿಗಳನ್ನು ಕರೆತರುತ್ತಿದ್ದ ರಷ್ಯಾದ ಮಿಲಿಟರಿ ವಿಮಾನ ಪತನ: 74 ಸಾವಿನ ಶಂಕೆ!

Date:

Advertisements

ಉಕ್ರೇನ್ ಯುದ್ಧ ಕೈದಿಗಳನ್ನು ಕರೆತರುತ್ತಿದ್ದ ರಷ್ಯಾ ಮಿಲಿಟರಿ ವಿಮಾನ ಪತನಗೊಂಡು ವಿಮಾನದಲ್ಲಿದ್ದ ಎಲ್ಲ 74 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳೀಯ ಕಾಲಮಾನ 11 ಗಂಟೆ ವೇಳೆ ಬೆಲ್‌ಗೊರೋಡ್‌ ಪ್ರಾಂತ್ಯದಿಂದ ಯುದ್ಧ ಕೈದಿಗಳನ್ನು ವಾಪಸ್‌ ಕರೆತರುತ್ತಿದ್ದ ವೇಳೆ ಪತನವಾಗಿದೆ. ಅಪಘಾತಕ್ಕೆ ಕಾರಣವನ್ನು ಇನ್ನಷ್ಟೆ ತಿಳಿಯಬೇಕಿದೆ.

ಅಗ್ನಿಶಾಮಕಗಳು, ಆಂಬ್ಯುಲೆನ್ಸ್‌ಗಳು ಹಾಗೂ ಪೊಲೀಸರು ಘಟನಾ ಸ್ಥಳ ಕೊರೊಚನ್ಸೆ ಜಿಲ್ಲೆಯ ಬೆಲ್‌ಗೊರೋಡ್‌ಗೆ ತಲುಪಿದ್ದಾರೆ ಎಂದು ಸ್ಥಳೀಯ ತುರ್ತು ಸೇವಾ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

Advertisements

ಬೆಲ್‌ಗೊರೋಡ್‌ ಪ್ರಾಂತ್ಯವು ಉಕ್ರೇನ್ ಗಡಿಯಲ್ಲಿದ್ದು, ಡಿಸೆಂಬರ್‌ನಲ್ಲಿ ಕ್ಷಿಪಣಿ ದಾಳಿಯಿಂದ 25 ಮೃತಪಟ್ಟಿರುವುದು ಒಳಗೊಂಡು ಹಲವು ತಿಂಗಳಿನಿಂದ ಉಕ್ರೇನ್ ಕಡೆಯಿಂದ ದಾಳಿ ನಡೆಸಲಾಗುತ್ತಿದೆ. ವಿಮಾನ ಪತನವಾಗಿ ಸ್ಫೋಟವಾಗಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

“ಆರು ಸಿಬ್ಬಂದಿ, ಮೂವರು ಭದ್ರತಾ ಸಿಬ್ಬಂದಿಯೊಂದಿಗೆ ಉಕ್ರೇನಿನ 65 ಯುದ್ಧ ಕೈದಿಗಳನ್ನು ಸೆರೆ ಹಿಡಿದು ವಿನಿಮಯಕ್ಕಾಗಿ ಬೆಲಗೊರೋಡ್ ಪ್ರಾಂತ್ಯಕ್ಕೆ ಕರೆತರಲಾಗುತ್ತಿತ್ತು” ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಉಕ್ರೇನ್ ಸೇನೆ ತನ್ನ ಸ್ವಂತ ಸೇನೆಯನ್ನೇ ಹೊಡೆದುರುಳಿಸಿದೆ. ನಮ್ಮ ಪೈಲಟ್‌ಗಳು ಮಾನವೀಯತೆಯ ಕಾರ್ಯಾಚರಣೆ ಮಾಡುತ್ತಿದ್ದ ನಮ್ಮ ಪೈಲಟ್‌ಗಳನ್ನು ಕೂಡ ಹೊಡೆದುರುಳಿಸಲಾಗಿದೆ” ಎಂದು ರಷ್ಯ ಸಂಸತ್ತಿನ ಕೆಳಮನೆಯ ಸ್ಪೀಕರ್ ಆರೋಪಿಸಿದ್ದಾರೆ.

ರಷ್ಯಾ ಕ್ಷಿಪಣಿ ದಾಳಿಯಿಂದ ನಮ್ಮ ವಾಯು ಪಡೆಯ 18 ಮಂದಿ ಮೃತಪಟ್ಟಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್...

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ...

Download Eedina App Android / iOS

X