ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

Date:

Advertisements

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌ ಸರ್ಫರಾಜ್‌ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಾಹೋರ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.

ಪಾಕ್‌ನ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಪ್ರಮುಖವಾಗಿ ಬೇಕಾಗಿದ್ದ ಅಮೀರ್‌ ಸರ್ಪರಾಜ್ ಪಾಕಿಸ್ತಾನದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸರಬ್ಜಿತ್ ಸಿಂಗ್‌ನನ್ನು 2013 ಏಪ್ರಿಲ್‌ 23ರಂದು  ಅಮೀರ್‌ ಹಾಗೂ ಆತನ ಸಹಚರರು ಲಾಹೋರ್‌ ಜೈಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಸರಬ್ಜಿತ್ ಮೇ 2, 2013ರಂದು ಮೃತಪಟ್ಟಿದ್ದರು. ಸಾವಿಗೂ ಮುನ್ನ ಸರಬ್ಜಿತ್ ಪಾಕ್‌ನ ಜೈಲುಗಳಲ್ಲಿ 23 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಸಾಕ್ಷ್ಯಧಾರ ಕೊರತೆಯಿಂದ ಅಮೀರ್‌ ಸರ್ಪರಾಜ್‌ನನ್ನು ಪಾಕ್‌ನ ಕೋರ್ಟ್ 2018ರಲ್ಲಿ ನಿರಪರಾಧಿ ಎಂದು ತೀರ್ಪು ನೀಡಿತ್ತು.

ಗೂಢಾಚಾರ ಆರೋಪ ಹಾಗೂ ಪಾಕ್‌ನ ಪಂಜಾಬ್‌ ಪ್ರಾಂತ್ಯದಲ್ಲಿ 14 ನಾಗರಿಕರನ್ನು ಕೊಂದ ಆರೋಪದ ಮೇಲೆ ಭಾರತದ ಪಂಜಾಬ್‌ನ ನಿವಾಸಿ ಸರಬ್ಜಿತ್ ಸಿಂಗ್‌ನನ್ನು 1990ರಲ್ಲಿ ಬಂಧಿಸಲಾಗಿತ್ತು. 1991ರಲ್ಲಿ ಪಾಕ್‌ನ ಸೇನಾ ಕಾಯ್ದೆಯಡಿ ಸರಬ್‌ಜಿತ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

ಸರಬ್‌ಜಿತ್‌ಗೆ ಗಲ್ಲು ಶಿಕ್ಷೆ ನೀಡಿರುವುದನ್ನು ಆತನ ಕುಟುಂಬ ಹಾಗೂ ಭಾರತ ಸರ್ಕಾರ ನಿರಾಕರಿಸಿತ್ತು. ಕೃಷಿ ಮಾಡುವ ಸಂದರ್ಭ ಅರಿವಿಲ್ಲದೆ ಸರಬ್ಜಿತ್ ಪಾಕ್‌ ಗಡಿ ಪ್ರವೇಶಿಸಿದ್ದರು ಎಂದು ಕುಟುಂಬದ ಸದಸ್ಯರು ಗೂಢಾಚಾರಿ ಆರೋಪವನ್ನು ತಳ್ಳಿ ಹಾಕಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X