ಟೆಲಿಗ್ರಾಮ್ ಮೆಸೆಜಿಂಗ್ ಆಪ್ ಸಿಇಒ ಪವೆಲ್ ಡೊರಾವ್ ಬಂಧನ

Date:

Advertisements

ಬಿಲಿಯನೇರ್ ಉದ್ಯಮಿ, ಟೆಲಿಗ್ರಾಮ್ ಮೆಸೆಜಿಂಗ್ ಆಪ್‌ನ ಸ್ಥಾಪಕ ಮತ್ತು ಸಿಇಒ ಪವೆಲ್ ಡೊರಾವ್ ಅವರನ್ನು ಶನಿವಾರ (ಆ.24) ಸಂಜೆ ಪ್ಯಾರಿಸ್ ಹೊರವಲಯದ ಬೌರ್ಗೆಟ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಡೊರಾವ್ ಅವರು ತನ್ನ ಖಾಸಗಿ ಜೆಟ್ ಮೂಲಕ ವಿದೇಶಕ್ಕೆ ಪ್ರಯಾಣಿಸುತ್ತಿದ್ದರು. ಪ್ರಾಥಮಿಕ ತನಿಖಾ ಕಾರಣದಿಂದ ಅವರ ವಿರುದ್ದ ಫ್ರಾನ್ಸ್‌ನಲ್ಲಿ ಪೊಲೀಸ್ ವಾರಂಟ್ ಜಾರಿಯಾಗಿತ್ತು ಎಂದು ಟಿಎಫ್1 ವೆಬ್ ಸೈಟ್ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

Advertisements

ಡುರೊವ್ ತನ್ನ ಅಪ್ಲಿಕೇಷನ್ ಕ್ರಿಮಿನಲ್ ಬಳಕೆಯನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲು ವಿಫಲರಾಗಿದ್ದಾರೆ ಎಂದು ಶಂಕಿಸಲಾಗಿದೆ. ತನಿಖಾಧಿಕಾರಿಯೊಬ್ಬರು, ‘ಟೆಲಿಗ್ರಾಮ್‌ನಲ್ಲಿ ಸಾಕಷ್ಟು ತೊಂದರೆಗಳು ನಡೆಯುತ್ತಿವೆ’ ಎಂದು ಹೇಳಿದ್ದಾರೆ. ಇನ್ನು ತಾನು ಅರೆಸ್ಟ್​ ಆಗಬಹುದೆಂದು ತಿಳಿದಿದ್ದರೂ ಟೆಲಿಗ್ರಾಂ ಸಂಸ್ಥಾಪಕ ಪ್ಯಾರಿಸ್‌ಗೆ ಬಂದಿದ್ದರೆಂಬುವುದು ಅಚ್ಚರಿ ಮೂಡಿಸುವ ವಿಚಾರವಾಗಿದೆ.

ರಷ್ಯಾದ ಮೂಲದ ಡುರೊವ್ ಅವರು ಈ ಸಂದೇಶ ಕಳುಹಿಸುವ ಅಪ್ಲಿಕೇಶನ್ ಟೆಲಿಗ್ರಾಮ್ ಅನ್ನು ಪ್ರಾರಂಭಿಸಿದರು. ಅವರ ಸಂಪತ್ತು $15.5 ಬಿಲಿಯನ್ ಎಂದು ಅಂದಾಜಿಸಲಾಗಿದೆ. ಈ ಅಪ್ಲಿಕೇಶನ್ ರಷ್ಯಾ, ಉಕ್ರೇನ್ ಮತ್ತು ಪೂರ್ವ ಯುರೋಪಿಯನ್ ದೇಶಗಳಲ್ಲಿ ಬಹಳ ಜನಪ್ರಿಯವಾಗಿದೆ. ಫೇಸ್‌ಬುಕ್, ಯೂಟ್ಯೂಬ್, ವಾಟ್ಸಾಪ್, ಇನ್‌ಸ್ಟಾಗ್ರಾಮ್, ಟಿಕ್‌ಟಾಕ್ ಮತ್ತು ವೀಚಾಟ್ ನಂತರ ಟೆಲಿಗ್ರಾಮ್ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಂದಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

Download Eedina App Android / iOS

X