ಭಾರತ-ಪಾಕ್ ಉದ್ವಿಗ್ನತೆ | ‘ದಯವಿಟ್ಟು ಹಾಗೆ ಮಾಡಬೇಡಿ’ ಎಂದು ಬೇಡಿಕೊಂಡರು: 80ನೇ ಬಾರಿ ಸುಂಕ ಬೆದರಿಕೆ ಕತೆ ಹೇಳಿದ ಟ್ರಂಪ್

Date:

2025ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸಂಘರ್ಷವನ್ನು ಸುಂಕ ಹೆಚ್ಚಿಸುವ ಬೆದರಿಕೆ ಹಾಕಿ ತಾವೇ ನಿಲ್ಲಿಸಿದ್ದು ಎಂಬ ತಮ್ಮ ಹಳೆಯ ಕತೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುರುವಾರ ಪುನರುಚ್ಚರಿಸಿದ್ದಾರೆ. ಹಲವು ಜಾಗತಿಕ ಯುದ್ಧಗಳನ್ನು ನಿಲ್ಲಿಸುವಲ್ಲಿ ತಮ್ಮ ಪಾತ್ರ ಪ್ರಮುಖವಾದುದ್ದು ಎಂದು ಹೇಳಿಕೊಂಡಿದ್ದಾರೆ.

- Advertisement -

ತಮ್ಮ ಕಚೇರಿಯಲ್ಲಿ ನಡೆದ ಕಾರ್ಯನಿರ್ವಾಹಕ ಆದೇಶ ಸಹಿ ಮಾಡುವ ಕಾರ್ಯಕ್ರಮದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ನಾನು ಎಂಟು ಯುದ್ಧಗಳನ್ನು ಇತ್ಯರ್ಥಪಡಿಸಿದ್ದೇನೆ. ಬಹುತೇಕ ಪ್ರತಿಯೊಂದು ಸಂದರ್ಭದಲ್ಲೂ, ಆ ದೇಶದವರು ನನಗೆ ಧನ್ಯವಾದ ಹೇಳುವ ಪತ್ರಗಳನ್ನು ಕಳುಹಿಸಿದ್ದಾರೆ ಮತ್ತು ನೊಬೆಲ್ ಸಮಿತಿಗೆ ಪತ್ರಗಳನ್ನು ಕಳುಹಿಸಿದ್ದಾರೆ” ಎಂದು ಹೇಳಿದರು. ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಭಾರತ ಪಾಕಿಸ್ತಾನ ಕದನ ವಿರಾಮ | ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ ಎಂದ ನೆಟ್ಟಿಗರು

“ಭಾರತದೊಂದಿಗೆ ಯುದ್ಧವಾಗುವುದನ್ನು ತಪ್ಪಿಸಿ ನಾನು 30 ರಿಂದ 50 ಮಿಲಿಯನ್ (30ರಿಂದ 50 ಲಕ್ಷ) ಜೀವಗಳನ್ನು ಉಳಿಸಿದ್ದೇನೆ ಎಂದು ಪಾಕಿಸ್ತಾನದ ಪ್ರಧಾನಿ ಹೇಳಿದ್ದಾರೆ. ಆದರೆ ಯುದ್ಧ ನಡೆದಿದ್ದರೆ ಅದಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು. ಎರಡು ಪರಮಾಣು ರಾಷ್ಟ್ರಗಳು ಇಷ್ಟೊಂದು ಸಾವು ನೋವಿಗೆ ಮುಂದಾಗಿತ್ತು. 11 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಸುಂಕ ಹೆಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿ ನಾನು ಯುದ್ಧ ನಿಲ್ಲಿಸಿದೆ. ಅವರು ಅಯ್ಯೋ ದಯವಿಟ್ಟು ಹಾಗೆ ಮಾಡಬೇಡಿ ಎಂದು ಉದ್ಘರಿಸಿದರು” ಎಂದು ಮತ್ತೆ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ ಕೀರ್ತಿಯನ್ನು ಟ್ರಂಪ್ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಮೇ 10ರಂದು ಉಭಯ ದೇಶಗಳು ಪೂರ್ಣ ಮತ್ತು ತಕ್ಷಣದ ಕದನ ವಿರಾಮಒಪ್ಪಂದ ಮಾಡಿಕೊಂಡಿದೆ ಎಂದು ಮೊದಲು ತಾವೇ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದಾಗಿನಿಂದ ಈವರೆಗೆ 80ಕ್ಕೂ ಅಧಿಕ ಬಾರಿ ಈ ಹೇಳಿಕೆಯನ್ನೇ ಟ್ರಂಪ್ ನೀಡುತ್ತಾ ಬಂದಿದ್ದಾರೆ. ವಿದೇಶಾಂಗ ಸಚಿವಾಲಯ ಈ ಟ್ರಂಪ್ ಹೇಳಿಕೆಯನ್ನು ಅಲ್ಲಗಳೆಯುತ್ತಿದೆ. ಆದರೆ ಈವರೆಗೆ ಒಂದು ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಪ್ರಧಾನಿಯ ಮೌನವನ್ನು ವಿಪಕ್ಷಗಳು ಟೀಕಿಸಿವೆ, ಪ್ರಶ್ನಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...