ಭಾರತ-ಪಾಕ್ ಘರ್ಷಣೆ ಶೀಘ್ರವೇ ಕೊನೆಗೊಳ್ಳುತ್ತದೆ ಎಂದ ಟ್ರಂಪ್‌; ಸಂಯಮಕ್ಕೆ ವಿಶ್ವಸಂಸ್ಥೆ ಕರೆ

Date:

Advertisements

ಬುಧವಾರ ಮುಂಜಾನೆ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತದ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ 7 ಮಂದಿ ಪಾಕ್ ನಾಗರಿಕರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಗೆ ಶೀಘ್ರವೇ ಪ್ರತಿಕ್ರಿಯಿಸುತ್ತೇವೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ಬಿಗಡಾಯಿಸಿದೆ. ಈ ನಡುವೆ, ಘರ್ಷಣೆ ಬೇಡ, ಸಂಯಮದಿಂದಿರಿ ಎಂದು ಎರಡೂ ರಾಷ್ಟ್ರಗಳಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕರೆ ಕೊಟ್ಟಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್, ‘ಘರ್ಷಣೆಯು ಶೀಘ್ರವೇ ಕೊನೆಗೊಳ್ಳುತ್ತದೆ’ ಎಂದು ಹೇಳಿದ್ದಾರೆ.

ಪಾಕ್ ನೆಲೆಗಳ ಮೇಲೆ ಭಾರತ ದಾಳಿ ಮಾಡಿದ ಬಳಿಕ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಟ್ರಂಪ್, “ಈ ಉದ್ವಿಗ್ನತೆಯು ನಾಚಿಕೆಗೇಡಿನ ಸಂಗತಿ. ಉಭಯ ರಾಷ್ಟ್ರಗಳ ನಡುವಿನ ಮಿಲಿಟರಿ ಉದ್ವಿಗ್ನತೆಯು ಆದಷ್ಟು ಬೇಗ ಕೊನೆಗೊಳ್ಳುತ್ತದೆ” ಎಂದು ಹೇಳಿದ್ದಾರೆ.

ಟ್ರಂಪ್ ಭಾರತದ ವಾಯುದಾಳಿಗಳನ್ನು ಖಂಡಿಸಲಿಲ್ಲ ಅಥವಾ ಪಾಕಿಸ್ತಾನವು ಪ್ರತೀಕಾರದಿಂದ ದೂರವಿರಬೇಕೆಂದು ಸ್ಪಷ್ಟವಾಗಿ ಕರೆ ನೀಡಿಲ್ಲ ಎಂಬುದು ಗಮನಾರ್ಹ.

Advertisements

ಇನ್ನು, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು, “ಭಾರತ ಮತ್ತು ಪಾಕಿಸ್ತಾನದ ನಡುವೆ ಮಿಲಿಟರಿ ಮುಖಾಮುಖಿಯನ್ನು ಜಗತ್ತು ನಿಭಾಯಿಸಲಾರದು. ಉಭಯ ರಾಷ್ಟ್ರಗಳು ಸಂಯಮದಿಂದ ವರ್ತಿಸಬೇಕು” ಎಂದು ಹೇಳಿದ್ದಾರೆ.

ಭಾರತದ ರಕ್ಷಣಾ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದ್ದು, “ದಾಳಿಗಳನ್ನು ಜವಾಬ್ದಾರಿಯುತವಾಗಿ, ಪ್ರಕೃತಿಯಲ್ಲಿ ಯಾವುದೇ ಹಾನಿಯಾಗದಂತೆ ಭಯೋತ್ಪಾದಕ ನೆಲೆಗಳ ಮೇಲೆ ಮಾತ್ರವೇ ನಡೆಸಿದ್ದೇವೆ. ಯಾವುದೇ ನಾಗರಿಕ, ಆರ್ಥಿಕ ಅಥವಾ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆದಿಲ್ಲ” ಎಂದು ಹೇಳಿದೆ.

ಭಾರತವು ದಾಳಿಗಳ ಕುರಿತಂತೆ ಇತರ ದೇಶಗಳಿಗೆ ರಾಜತಾಂತ್ರಿಕ ಸಂಪರ್ಕವನ್ನು ಪ್ರಾರಂಭಿಸಿದೆ. ಭಾರತೀಯ ಅಧಿಕಾರಿಗಳು ಅಮೆರಿಕ, ಇಂಗ್ಲೆಂಡ್, ಸೌದಿ ಅರೇಬಿಯಾ, ಯುಎಇ, ರಷ್ಯಾ ಹಾಗೂ ಇತರ ಹಲವಾರು ದೇಶಗಳಲ್ಲಿನ ತಮ್ಮ ಸಹವರ್ತಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ.

ಇದೆಲ್ಲದರ ನಡುವೆ, ಪಾಕಿಸ್ತಾನದ ಮಿಲಿಟರಿ ವಕ್ತಾರರು ಭಾರತ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದು ಹೇಳುತ್ತಿದ್ದಾರೆ. ಆದಾಗ್ಯೂ, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ “ಈ ಅಪ್ರಚೋದಿತ ಭಾರತೀಯ ದಾಳಿಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುವ ಸಂಪೂರ್ಣ ಹಕ್ಕನ್ನು ಪಾಕಿಸ್ತಾನ ಕಾಯ್ದಿರಿಸಿದೆ. ಇದು ‘ಯುದ್ಧ ಘೋಷಣೆ’ಯ ಸೂಚನೆಯಂತಿದೆ. ಪ್ರತಿಕ್ರಿಯೆಗೆ ದೃಢ ಪ್ರಕ್ರಿಯೆಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X