ಸಿಖ್ ಪ್ರತ್ಯೇಕತಾವಾದಿ ಹತ್ಯೆಗೆ ಸಂಚು: ಭಾರತೀಯ ಮಾಜಿ ಗುಪ್ತಚರ ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿದ ಅಮೆರಿಕ

Date:

Advertisements

ಕಳೆದ ವರ್ಷ ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್‌ ಸಿಂಗ್‌ ಪನ್ನೂ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ ‘ರಾ’ ದ ಭಾರತೀಯ ಮಾಜಿ ಅಧಿಕಾರಿ ವಿಕಾಸ್‌ ಯಾದವ್‌ ವಿರುದ್ಧ ಅಮೆರಿಕದ ನ್ಯಾಯಾಂಗ ಇಲಾಖೆಯು ಆರೋಪಪಟ್ಟಿ ದಾಖಲಿಸಿದೆ. ಕೆನಡಾ ಮಾಡಿರುವ ಇತ್ತೀಚಿನ ಆರೋಪಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆಯು ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಿಸುವ ಸಾಧ್ಯತೆಯಿದೆ. ಸಿಖ್ ಪ್ರತ್ಯೇಕತಾವಾದಿ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಭಾರತ ಸ್ಪಷ್ಟವಾಗಿ ನಿರಾಕರಿಸಿದೆ ಮತ್ತು ಆರೋಪಗಳನ್ನು ದೃಢೀಕರಿಸಲು ಯಾವುದೇ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿಲ್ಲ ಎಂದು ಹೇಳಿದೆ.

ಕೆಲವೇ ಗಂಟೆಗಳ ಮುನ್ನ, ವಿಕಾಸ್ ಮತ್ತು ಅಮಾನತ್ ಎಂದು ಕರೆಯಲ್ಪಡುವ 39 ವರ್ಷದ ಯಾದವ್ ವಿರುದ್ಧ ಕೊಲೆಗೆ ಸಂಚು ರೂಪಿಸಿದ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪ ಸಲ್ಲಿಸಿರುವುದಾಗಿ ಅಮೆರಿಕದ ನ್ಯಾಯಾಂಗ ಇಲಾಖೆ ಘೋಷಿಸಿದೆ.

ಈ ಸುದ್ದಿ ಓದಿದ್ದೀರಾ? ತೈವಾನ್ ವಿಚಾರದಲ್ಲಿ ಹಸ್ತಕ್ಷೇಪ ನಿಲ್ಲಿಸಿ: ಭಾರತಕ್ಕೆ ಚೀನಾ ಆಗ್ರಹ

Advertisements

ಯಾದವ್ ಅವರು ಭಾರತೀಯ ವಿದೇಶಾಂಗ ಸೇವೆ ಮತ್ತು ‘ರಾ’ ವಿಭಾಗದಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ ಎಂದು ಅಮೆರಿಕ ಹೇಳಿದೆ. ಅಲ್ಲದೆ ಈ ಹಿಂದೆ ಸಿಆರ್‌ಪಿಎಫ್‌ನಲ್ಲಿ ಫೀಲ್ಡ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವುದಾಗಿ ಯಾದವ್ ಹೇಳಿಕೊಂಡಿದ್ದಾರೆ ಎಂದು ಹೇಳಿದೆ. ಯಾದವ್‌ಗೆ ಭಾರತದ ನಿರ್ದೇಶನವಿದೆ ಎಂದು ಆರೋಪಿಸಿದೆ.

ನ್ಯೂಯಾರ್ಕ್‌ನ ಸದರ್ನ್ ಡಿಸ್ಟ್ರಿಕ್ಟ್‌ನ ಜಿಲ್ಲಾ ನ್ಯಾಯಾಲಯದಲ್ಲಿ ದೋಷಾರೋಪಣೆ ಸಲ್ಲಿಸಲಾಗಿದ್ದು, ಯಾದವ್, 53 ವರ್ಷದ ನಿಖಿಲ್ ಗುಪ್ತಾ ಅವರ ಸಹ-ಸಂಚುಕೋರ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಆರೋಪಿಸಿದೆ. ಕಳೆದ ವರ್ಷ ನಿಖಿಲ್ ಗುಪ್ತಾ ಅವರ ವಿರುದ್ಧ ಆರೋಪ ಹೊರಿಸಿ ಅಮೆರಿಕ ಸರ್ಕಾರಕ್ಕೆ ಹಸ್ತಾಂತರಿಸಲಾಗಿತ್ತು.

“ನ್ಯಾಯಾಂಗ ಇಲಾಖೆಯು ಅಮೆರಿಕದ ನಾಗರಿಕರಿಗೆ ಹಾನಿ ಮಾಡಲು ಯತ್ನಿಸುವ ಯಾವುದೇ ವ್ಯಕ್ತಿಯನ್ನು ಅವರ ಸ್ಥಾನ ಅಥವಾ ಅಧಿಕಾರವನ್ನು ಲೆಕ್ಕಿಸದೆ ಹೊಣೆಗಾರರನ್ನಾಗಿ ಮಾಡುತ್ತದೆ ” ಎಂದು ಅಟಾರ್ನಿ ಜನರಲ್ ಮೆರಿಕ್ ಬಿ ಗಾರ್ಲ್ಯಾಂಡ್ ಅವರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X