ಯುಕೆ ಚುನಾವಣೆ | ಕೀರ್ ಸ್ಟಾರ್‌ಮರ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Date:

Advertisements

ಯುಕೆ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್‌ಮರ್‌ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ, ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರಿಗೆ ಸಂದೇಶವನ್ನೂ ನೀಡಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷವು ಕನ್ಸರ್ವೇಟಿವ್‌ ಪಕ್ಷದ ವಿರುದ್ಧ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಒಟ್ಟು 650 ಸ್ಥಾನಗಳ ಪೈಕಿ ಆಡಳಿತದಲ್ಲಿದ್ದ ಕನ್ಸರ್ವೇಟಿವ್ ಪಕ್ಷ ಕೇವಲ 120 ಸ್ಥಾನಗಳನ್ನು ಗೆದಿದ್ದರೆ, ಲೇಬರ್ ಪಕ್ಷವು 412 ಸ್ಥಾನಗಳನ್ನು ಗೆದ್ದಿದೆ.

ಚುನಾವಣೆಯಲ್ಲಿ ಗೆದ್ದ ಲೇಬರ್ ಪಕ್ಷದ ಕೀರ್ ಸ್ಟಾರ್‌ಮರ್‌ ಅವರಿಗೆ ಶುಭ ಕೋರಿ ಟ್ವೀಟ್‌ ಮಾಡಿರುವ ಮೋದಿ, “ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಗಮನಾರ್ಹ ವಿಜಯ ಸಾಧಿಸಿದ ಕೀರ್ ಸ್ಟಾರ್‌ಮರ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಎಲ್ಲ ಕ್ಷೇತ್ರಗಳಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು, ಪರಸ್ಪರ ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಸಕಾರಾತ್ಮಕ ಮತ್ತು ರಚನಾತ್ಮಕ ಸಹಯೋಗವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

Advertisements

 

ಸುನಕ್ ಅವರದ್ದ ‘ಶ್ಲಾಘನೀಯ ನಾಯಕತ್ವ’ ಎಂದು ಪ್ರಶಂಸಿಸಿರುವ ಮೋದಿ, ಭಾರತ-ಯುಕೆ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಸುನಕ್ ಅವರ ಕೊಡುಗೆಗಳಿಗಾಗಿ ಧನ್ಯವಾದ ಅರ್ಪಿಸಿದ್ದಾರೆ.

“ಬ್ರಿಟನ್‌ನ ನಿಮ್ಮ ಶ್ಲಾಘನೀಯ ನಾಯಕತ್ವಕ್ಕಾಗಿ ರಿಶಿ ಸುನಕ್ ಅವರಿಗೆ ಧನ್ಯವಾದಗಳು. ನಿಮ್ಮ ಅಧಿಕಾರಾವಧಿಯಲ್ಲಿ ನಿಮ್ಮ ಸಕ್ರಿಯ ಕೊಡುಗೆಯಿಂದಾಗಿ ಭಾರತ ಮತ್ತು ಯುಕೆ ನಡುವಿನ ಸಂಬಂಧವು ಗಟ್ಟಿಗೊಂಡಿದೆ. ನಿಮ್ಮ ಮುಂದಿನ ಭವಿಷ್ಯಕ್ಕೆ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X