ಉಕ್ರೇನ್‌-ರಷ್ಯಾ ಸಂಘರ್ಷ | ಮಾತುಕತೆ ವಿಫಲ: ರಷ್ಯಾ ಡ್ರೋನ್ ದಾಳಿಗೆ ಉಕ್ರೇನ್‌ನ 9 ಮಂದಿ ಬಲಿ

Date:

Advertisements

ಕಳೆದ ಮೂರು ವರ್ಷಗಳಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ಸಂಘರ್ಷ ನಡೆಯುತ್ತಿದೆ. ಉಕ್ರೇನ್ ಮೇಲೆ ರಷ್ಯಾ ನಿರಂತರವಾಗಿ ದಾಳಿ ಮಾಡುತ್ತಿದೆ. ಈ ನಡುವೆ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಣೆಯ ಮಾತುಕತೆಗಳು ಆರಂಭವಾಗಿದ್ದವು. ಆದರೆ, ಇಂದು (ಶನಿವಾರ) ಮಾತುಕತೆ ವಿಫಲವಾದ ಕೆಲವೇ ಗಂಟೆಗಳಲ್ಲಿ ಉಕ್ರೇನ್‌ ಮೇಲೆ ರಷ್ಯಾ ಮತ್ತೆ ದಾಳಿ ನಡೆಸಿದೆ. ರಷ್ಯಾ ನಡೆಸಿದ ಡ್ರೋನ್ ದಾಳಿಗೆ ಉಕ್ರೇನ್‌ನ ಒಂಬತ್ತು ಮಂದಿ ಬಲಿಯಾಗಿದ್ದಾರೆ.

ರಷ್ಯಾ ಹಾರಿಸಿದ ಡ್ರೋನ್ ಉಕ್ರೇನ್‌ನ ಈಶಾನ್ಯ ಸುಮಿ ಪ್ರದೇಶದ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದೆ. ರಷ್ಯಾ ಹಾರಿಸಿದ ಡ್ರೋನ್ ಚಲಿಸುತ್ತಿದ್ದ ಬಸ್‌ ಮೇಲೆ ದಾಳಿ ಮಾಡಿದ್ದು, ಬಸ್‌ನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ.

ದಾಳಿ ಬಗ್ಗೆ ಸುಮಿ ಸ್ಥಳೀಯ ಆಡಳಿತವು ಮಾಹಿತಿ ನೀಡಿದ್ದು, “ರಷ್ಯಾ ಮತ್ತೊಂದು ಯುದ್ಧ ಅಪರಾಧ ಎಸಗಿದೆ. ನಾಗರಿಕ ಸಾರಿಗೆಯ ಮೇಲೆ ದುರುದ್ದೇಶದಿಂದ ದಾಳಿ ನಡೆಸಿ, ಅಮಾಯಕ ನಾಗರಿಕರನ್ನು ಕೊಂದಿದೆ” ಎಂದು ಆರೋಪಿಸಿದೆ.

Advertisements

ಶುಕ್ರವಾರ ಬೆಳಗ್ಗೆ ಉಭಯ ರಾಷ್ಟ್ರಗಳು ಕದನ ವಿರಾಮ ಸ್ಥಾಪಿಸುವುದಕ್ಕಾಗಿ ಟರ್ಕಿಯಲ್ಲಿ ಸಭೆ ಸೇರಿ, ಮಾತುಕತೆ ನಡೆಸಿದ್ದವು. ನಿರಂತರವಾಗಿ ನಡೆದ ಮಾತುಕತೆಯಲ್ಲಿ ಯಾವುದೇ ಮಹತ್ವದ ನಿರ್ಧಾರ ಅಥವಾ ಒಪ್ಪಂದಕ್ಕೆ ಎರಡೂ ರಾಷ್ಟ್ರಗಳು ಒಮ್ಮತ ವ್ಯಕ್ತಪಡಿಸಿಲ್ಲ. ಉಭಯ ರಾಷ್ಟ್ರಗಳ ಖೈದಿಗಳ ವಿನಿಮಯಕ್ಕೆ ಇಬ್ಬರೂ ಸಮ್ಮತಿಸಿದರೂ, ಸಂಘರ್ಷ ಕೊನೆಗೊಳಿಸಲು ಅಗತ್ಯವಾದ ಪ್ರಮುಖ ಷರತ್ತುಗಳಿಗೆ ಎರಡೂ ರಾಷ್ಟ್ರಗಳ ಭಿನ್ನಾಭಿಪ್ರಾಯ ಹೊಂದಿದ್ದವು. ಹೀಗಾಗಿ, ಮಾತುಕತೆ ವಿಫಲವಾಗಿದೆ ಎಂದು ವರದಿಯಾಗಿದೆ.

ಆ ಸಭೆಗೂ ಮುನ್ನ ಉಕ್ರೇನ್‌ ಅಧ್ಯಕ್ಷ ವ್ಲೊಡಿಮಿರ್ ಝೆಲೆನ್ಸ್ಕಿ ಅವರು ಅಮೆರಿಕ, ಫ್ರಾನ್ಸ್, ಜರ್ಮನಿ, ಯುಕೆ ಮತ್ತು ಪೋಲೆಂಡ್ ನಾಯಕರೊಂದಿಗೆ ಚರ್ಚಿಸಿದ್ದಾರೆ. ಆ ಬಳಿಕ ರಷ್ಯಾದೊಂದಿಗೆ ಸಭೆ ನಡೆದಿದೆ. ಆದರೆ, ಸಭೆಯಲ್ಲಿ “ಪೂರ್ಣ ಮತ್ತು ಬೇಷರತ್ತಾದ ಕದನ ವಿರಾಮ ಮತ್ತು ಹತ್ಯೆಗಳನ್ನು ಕೊನೆಗೊಳಿಸಬೇಕು ಎಂಬ ಷರತ್ತನ್ನು ರಷ್ಯಾ ತಿರಸ್ಕರಿಸಿದೆ” ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಭಾರತ-ಪಾಕ್ ಸಂಘರ್ಷ | ಜಾಗತಿಕವಾಗಿ ಭಾರತಕ್ಕೆಷ್ಟು ಬೆಂಬಲ ಸಿಕ್ಕಿತು?

“ಯುದ್ಧವನ್ನು ಕೊನೆಗೊಳಿಸಲು ರಷ್ಯಾ ಸಿದ್ಧವಾಗುವವರೆಗೆ ರಷ್ಯಾದ ಮೇಲೆ ಒತ್ತಡ ಹೇರಬೇಕು. ಕದನ ವಿರಾಮವು ಶಾಂತಿ ಸಾಧಿಸುವುದರ ಮೊದಲ ಹೆಜ್ಜೆಯಾಗಿದೆ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾದ ಪಡೆಗಳು ಉಕ್ರೇನ್‌ನ ಸರಿಸುಮಾರು ಐದನೇ ಒಂದು ಭಾಗವನ್ನು ಆಕ್ರಮಿಸಿಕೊಂಡಿವೆ. ರಷ್ಯಾದ ಅಧ್ಯಕ್ಷ ಪುಟಿನ್ ಅವರು ಕೈವ್ ಪ್ರದೇಶವನ್ನು ರಷ್ಯಾ ಸುಪರ್ದಿಗೆ ನೀಡಬೇಕು, ನ್ಯಾಟೋಗೆ ಸೇರುವ ನಿರ್ಧಾರವನ್ನು ಉಕ್ರೇನ್‌ ಕೈಬಿಡಬೇಕು, ತಟಸ್ಥ ನಿಲುವನ್ನು ಅಳವಡಿಸಿಕೊಳ್ಳಬೇಕು ಎಂದು ತಾಕೀತು ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X