ಜಮ್ಮು ಕಾಶ್ಮೀರ ದಾಳಿ: ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ ವಿಶ್ವಸಂಸ್ಥೆ

Date:

Advertisements

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ʼಏಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ 26 ಜನರು ಮೃತಪಟ್ಟ ಸಶಸ್ತ್ರ ದಾಳಿಯನ್ನು ಪ್ರಧಾನ ಕಾರ್ಯದರ್ಶಿಗಳು ಬಲವಾಗಿ ಖಂಡಿಸುತ್ತಾರೆʼ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಪರವಾಗಿ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬೈಸರಣ್ ಹುಲ್ಲುಗಾವಲಿನಲ್ಲಿ ಮಂಗಳವಾರ ಮಧ್ಯಾಹ್ನ ಮೂವರು ಶಂಕಿತ ಭಯೋತ್ಪಾದಕರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇವರಲ್ಲಿ ಇಬ್ಬರು ವಿದೇಶಿಯರು ಸೇರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಇದು ಜಮ್ಮುಕಾಶ್ಮೀರದಲ್ಲಿ ನಡೆದಿರುವ ಇತ್ತೀಚಿನ ಅತಿ ದೊಡ್ಡ ಭಯೋತ್ಪಾದಕ ದಾಳಿಯಾಗಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ,ಇದು ಹೇಯ ಕೃತ್ಯವಾಗಿದೆ ಎಂದು ಹೇಳಿದ್ದರು.

ಉಗ್ರರ ಗುಂಡಿಗೆ ಸಿಲುಕಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಈ ದಾಳಿ ನಡೆದಿದೆ. ಮೃತಪಟ್ಟವರಲ್ಲಿ ಇಬ್ಬರು ವಿದೇಶಿಯರು, ಇಬ್ಬರು ಸ್ಥಳೀಯರು ಇದ್ದಾರೆ.

ಪಾಕಿಸ್ತಾನದಲ್ಲಿ ನೆಲೆಗೊಂಡಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ‘ಲಷ್ಕರ್–ಎ–ತಯ್ಯಬಾ’ದ ಜೊತೆ ನಂಟು ಹೊಂದಿರುವ ‘ದಿ ರೆಸಿಸ್ಟೆನ್ಸ್‌ ಫ್ರಂಟ್‌’ ಈ ದಾಳಿಯನ್ನು ತಾನೇ ನಡೆಸಿರುವುದಾಗಿ ಹೇಳಿಕೊಂಡಿದೆ.

ಭಯೋತ್ಪಾದಕರು ಜಮ್ಮುವಿನ ಕಿಶ್ತವಾಢ ದಿಂದ, ಕೋಕರ್ನಾಗ್ ಮೂಲಕ ಬೈಸರನ್‌ಗೆ ಬಂದಿರಬಹುದು ಎಂದು ಅಧಿಕಾರಿಗಳು ಊಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X