ಹಿಂಡೆನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು ಸ್ಥಗಿತಗೊಳಿಸಿದ ಸ್ಥಾಪಕ ನಾಥನ್ ಆಂಡರ್ಸನ್

Date:

Advertisements

ಅದಾನಿ ಗ್ರೂಪ್ ಸೇರಿದಂತೆ ವಿಶ್ವದ ಹಲವಾರು ಉದ್ಯಮಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದ ಅಮೆರಿಕ ಮೂಲದ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸುವುದಾಗಿ ಸಂಸ್ಥಾಪಕ ನಾಥನ್ ಆಂಡರ್ಸನ್ ತಿಳಿಸಿದ್ದಾರೆ.

ಈ ಬಗ್ಗೆ ಹಿಂಡೆನ್ ಬರ್ಗ್ ವೆಬ್‌ಸೈಟ್‌ನಲ್ಲಿ ಬರೆದುಕೊಂಡಿರುವ ನಾಥನ್ ಆಂಡರ್ಸನ್, ಕಳೆದ ಒಂದು ವರ್ಷದಿಂದ ನನ್ನ ಕುಟುಂಬ, ನನ್ನ ಸ್ನೇಹಿತರು ಹಾಗೂ ತಂಡದೊಂದಿಗೆ ಹಂಚಿಕೊಂಡಿಂತೆ ನಾನು ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆಯನ್ನು ವಿಸರ್ಜಿಸುವ ನಿರ್ಧಾರವನ್ನು ಕೈಗೊಂಡಿದ್ದೇನೆ. ನಾವು ಅಂದುಕೊಂಡ ಕಾರ್ಯಕ್ರಮಗಳನ್ನು ಪೂರ್ಣಗೊಳಿದ ನಂತರ ಸಂಸ್ಥೆಯನ್ನು ಮುಚ್ಚುವ ಯೋಜನೆ ಕೈಗೊಂಡಿದ್ದೇವೆ. ನಿಯಂತ್ರಕಗಳಿಗೆ ಹಂಚಿಕೊಂಡಂತೆ ಪೋಜಿ ಪ್ರಕರಣಗಳು ಕೊನೆಯದಾಗಿದ್ದು, ನಾವು ಅದನ್ನು ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

“ಸಂಸ್ಥೆಯನ್ನು ಸ್ಥಗಿತಗೊಳಿಸುವುದಕ್ಕೆ ನಿರ್ದಿಷ್ಟ ಬೆದರಿಕೆ, ಆರೋಗ್ಯ ಕಾರಣಗಳು ಹಾಗೂ ದೊಡ್ಡ ವೈಯಕ್ತಿಕ ಕಾರಣಗಳು ಒಳಗೊಂಡಂತೆ ಯಾವುದೇ ಕಾರಣಗಳಿಲ್ಲ. ಆರಂಭದಲ್ಲಿ ನಾನು ಕೆಲವು ವಿಷಯಗಳನ್ನು ಸಾಬೀತುಪಡಿಸಬೇಕು ಎಂದು ನಾನು ಭಾವಿಸಿದೆ. ಅಂತಿಮವಾಗಿ ನನ್ನಲ್ಲಿ ನಾನು ಒಂದಿಷ್ಟು ಸುರಕ್ಷತೆಯನ್ನು ಕಂಡುಕೊಂಡಿದ್ದು, ಬಹುಷಃ ಇದು ನನ್ನ ಜೀವನದಲ್ಲಿ ಮೊದಲ ಬಾರಿಯಾಗಿದೆ” ಎಂದು ನಾಥನ್ ಆಂಡರ್ಸನ್ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಳ್ಳುವ ಕೆಲವೇ ದಿನಗಳ ಮೊದಲು ನಡೆದ ಈ ಬೆಳವಣಿಗೆಗೆ ಯಾವುದೇ ಕಾರಣಗಳು ಇಲ್ಲವೆಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರು ಅದಾನಿ ಸಮೂಹದ ಸಾಗರೋತ್ತರ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಅಮೆರಿಕಾದ ಕಿರು ಅವಧಿಯ ಮಾರಾಟ ಸಂಸ್ಥೆ ಹಿಂಡೆನ್‌ಬರ್ಗ್‌ ಸಂಶೋಧನಾ ಸಂಸ್ಥೆಯ ಇತ್ತೀಚೆಗೆ ಆರೋಪಿಸಿತ್ತು. ಈ ಆರೋಪ ಭಾರತದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X