ಭಾರತ-ಪಾಕ್ ಸಂಘರ್ಷ | ನೀವು ನಿಲ್ಲಿಸದಿದ್ದರೆ ಯಾವುದೇ ವ್ಯಾಪಾರ ಮಾಡಲ್ಲ ಎಂದಿದ್ದೆವು: ಡೊನಾಲ್ಡ್ ಟ್ರಂಪ್

Date:

Advertisements

‘ಆಪರೇಷನ್ ಸಿಂಧೂರ’ದ ಬಳಿಕ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವುದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿದ್ದು, “ನೀವಿಬ್ಬರು ಸಂಘರ್ಷ ನಿಲ್ಲಿಸದಿದ್ದರೆ ನಾವು ನಿಮ್ಮೊಂದಿಗೆ ಯಾವುದೇ ವ್ಯಾಪಾರ ಮಾಡುವುದಿಲ್ಲ ಎಂದಿದ್ದೆವು” ಎಂದು ಹೇಳಿಕೆ ನೀಡಿದ್ದಾರೆ.

ಶ್ವೇತಭವನದಲ್ಲಿ ಸೋಮವಾರ ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಕಳೆದ ವಾರ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಉದ್ಭವಿಸಿತ್ತು. ಈ ಎರಡೂ ದೇಶಗಳು ಪರಮಾಣು ಅಣ್ವಸ್ತ್ರವನ್ನು ಹೊಂದಿರುವ ದೇಶಗಳು. ಅವರು ನಿಜವಾಗಿಯೂ ಪರಿಸ್ಥಿತಿಯ ಗಂಭೀರತೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲು ನಾವು ಬಹಳಷ್ಟು ಸಹಾಯ ಮಾಡಿದ್ದೇವೆ” ಎಂದು ತಿಳಿಸಿದರು.

“ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ. ಅದು ಕೆಟ್ಟ ಪರಮಾಣು ಯುದ್ಧವಾಗಿರುತ್ತಿತ್ತು ಎಂದು ನಾನು ಭಾವಿಸುತ್ತೇನೆ. ಪರಮಾಣು ಯುದ್ದ ನಡೆದಿದ್ದರೆ ಲಕ್ಷಾಂತರ ಜನರು ಕೊಲ್ಲಲ್ಪಡುತ್ತಿದ್ದರು. ಇಂತಹ ಪರಮಾಣು ಯುದ್ಧವನ್ನು ನಾವು ನಿಲ್ಲಿಸಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಶಮನ ಮಾಡುವಲ್ಲಿ ನಿರತರಾದ ಅಮೆರಿಕದ ಉಪರಾಷ್ಟ್ರಪತಿ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Advertisements

“ನಾವು ಇಬ್ಬರ ವ್ಯಾಪಾರಕ್ಕೂ ಸಹಾಯ ಮಾಡಿದ್ದೇವೆ. ನಮಗೆ ನಿಮ್ಮೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿಕ್ಕಿದೆ. ಹಾಗಾಗಿ, ಸಂಘರ್ಷ ನಿಲ್ಲಿಸೋಣ ಎಂದಿದ್ದೆವು. ನೀವು ನಿಲ್ಲಿಸಿದರೆ, ನಾವು ವ್ಯಾಪಾರ ಮಾಡುತ್ತೇವೆ. ಒಂದು ವೇಳೆ ನೀವಿಬ್ಬರು ಸಂಘರ್ಷ ನಿಲ್ಲಿಸದಿದ್ದರೆ, ನಾವು ಯಾವುದೇ ವ್ಯಾಪಾರವನ್ನು ಮಾಡುವುದಿಲ್ಲ ಎಂದಿದ್ದೆವು. ಹಾಗಾಗಿ, ನಮ್ಮ ನೆರವಿನಿಂದ ಕದನ ವಿರಾಮ ಘೋಷಿಸಿದ್ದಾರೆ. ನಾನು ಮಾಡಿದಷ್ಟು ವ್ಯಾಪಾರ ಬೇರೆಯವರು ಯಾರೂ ಮಾಡಿರಲಿಕ್ಕಿಲ್ಲ” ಎನ್ನುವ ಮೂಲಕ ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ ಕ್ರೆಡಿಟ್ ಅನ್ನು ಡೊನಾಲ್ಡ್ ಟ್ರಂಪ್ ತೆಗೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X