ವಿಷಕಾರಿ ಕೆಮ್ಮಿನ ಸಿರಪ್ | ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಉಜ್ಬೇಕ್ ಕೋರ್ಟ್

Date:

Advertisements

ಭಾರತೀಯ ಮೂಲದ ಮರಿಯನ್ ಬಯೋಟೆಕ್ ಕೆಮ್ಮಿನ ಸಿರಪ್‌ ನಿಂದ 68 ಮಕ್ಕಳು ಮೃತಪಟ್ಟ ಅಪರಾಧಕ್ಕಾಗಿ ಉಜ್ಬೇಕಿಸ್ತಾನ ಕೋರ್ಟ್ ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋರ್ಟ್ 6 ತಿಂಗಳ ದೀರ್ಘಾವಧಿ ವಿಚಾರಣೆ ನಡೆಸಿತ್ತು.

ಸಿರಪ್‌ ನಿಂದ 65 ಮಂದಿ ಮೃತಪಟ್ಟಿದ್ದಾರೆ ಎಂದು ಸೆಂಟ್ರಲ್‌ ಏಷ್ಯನ್ ನೇಷನ್ ಈ ಮೊದಲು ತಿಳಿಸಿತ್ತು. ಆದರೆ ಕಳೆದ ತಿಂಗಳು ಸರ್ಕಾರಿ ಅಭಿಯೋಜಕರು ಸಾವಿನ ಸಂಖ್ಯೆ ಹೆಚ್ಚಿದ್ದು ಹಾಗೂ ಇನ್ನು ಇಬ್ಬರ ಮೇಲೆ ಆರೋಪವೊರಿಸಿದ್ದರು.

ಅಪರಾಧಿಗಳಿಗೆ 2 ರಿಂದ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪರಾಧಿಗಳಲ್ಲಿ ಕುರಾಮ್ಯಾಕ್ಸ್ ಮೆಡಿಕಲ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ಭಾರತೀಯ ಮೂಲದ ಸಿಂಗ್‌ ರಾಘವೇಂದ್ರ ಪ್ರಟಾರ್‌ ಎಂಬುವವರು ಸೇರಿದ್ದಾರೆ. ಮರಿಯನ್ ಬಯೋಟೆಕ್ ತಯಾರಿಸಿದ ಸಿರಪ್‌ಅನ್ನು ಉಜ್ಬೇಕಿಸ್ತಾನದಲ್ಲಿ ಮಾರಾಟ ಮಾಡಿದ ಕಂಪನಿಯಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಕಳಪೆ ಔಷಧಿಯನ್ನು ಆಮದು ಮಾಡಿಕೊಳ್ಳಲು ಪರವಾನಗಿ ನೀಡಲು ಉಸ್ತುವಾರಿ ವಹಿಸಿದ್ದ ಹಿರಿಯ ಅಧಿಕಾರಿಗಳಿಗೆ ದೀರ್ಘಾವಧಿ ಶಿಕ್ಷೆ ವಿಧಿಸಲಾಗಿದೆ.

ಸಿರಪ್‌ನಿಂದ ಮೃತಪಟ್ಟ ಹಾಗೂ ಅಂಗವಿಕಲಗೊಂಡ 68 ಮಕ್ಕಳ ಕುಟುಂಬಗಳಿಗೆ 80 ಸಾವಿರ ಡಾಲರ್‌ ಪರಿಹಾರ ನೀಡಲು ಕೋರ್ಟ್ ನಿರ್ಧರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X