ದಾಳಿಗೆ ಒಳಗಾಗಿರುವವನು ನಾನೇ: ಬ್ಯಾಂಕ್‌ಗಳು 14,000 ಕೋಟಿ ಸಾಲ ವಸೂಲಿ ಮಾಡಿವೆ ಎಂದ ವಿಜಯ್ ಮಲ್ಯ

Date:

Advertisements

ದೇಶ ಬಿಟ್ಟು ಪರಾರಿಯಾಗಿರುವ ಆರ್ಥಿಕ ಅಪರಾಧಿ, ಮದ್ಯದ ದೊರೆ ವಿಜಯ್ ಮಲ್ಯ ಬ್ಯಾಂಕುಗಳು 6,203 ಕೋಟಿ ರೂಪಾಯಿ ಸಾಲದ ಬದಲಾಗಿ ಸುಮಾರು 14,000 ಕೋಟಿ ರೂಪಾಯಿ ವಸೂಲಿ ಮಾಡಿವೆ. ಇದರಲ್ಲಿ ಶೇಕಡ 11.5 ಬಡ್ಡಿಯೂ ಸೇರಿದೆ ಎಂದು ಪುನರುಚ್ಚರಿಸಿದ್ದಾರೆ. ಹಾಗೆಯೇ “ಇಲ್ಲಿ ನಿಜವಾಗಿಯು ದಾಳಿಗೆ ಒಳಗಾಗಿರುವವನು ನಾನೇ” ಎಂದಿದ್ದಾರೆ.

ಇತ್ತೀಚೆಗೆ ವಾಣಿಜ್ಯೋದ್ಯಮಿ ರಾಜ್ ಶಮಾನಿ ಆಯೋಜಿಸಿದ್ದ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿರುವ ವಿಜಯ್ ಮಲ್ಯ ತಮ್ಮ ವಕೀಲರು ಬ್ಯಾಂಕ್‌ಗಳಿಗೆ 15 ಬಾರಿ ನೋಟಿಸ್ ನೀಡಿದ್ದಾರೆ ಮತ್ತು ಎಸ್‌ಬಿಐ ಅಧ್ಯಕ್ಷರಿಗೆ ವೈಯಕ್ತಿಕ ಪತ್ರ ಬರೆದಿದ್ದರೂ ‘ಬ್ಯಾಂಕ್ ಸ್ಟೇಟ್‌ಮೆಂಟ್’ ನೀಡಿಲ್ಲ. ಇದರ ಸ್ಪಷ್ಟಣೆಗಾಗಿ ಸಭೆ ನಡೆಸುವಂತೆ ಕೋರಿದೆ. ಆದರೆ ಬ್ಯಾಂಕುಗಳು ನಿರಾಕರಿಸಿವೆ ಎಂದು ಮಲ್ಯ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತೀಯ ಬ್ಯಾಂಕುಗಳು ಬಾಕಿಗಿಂತ ದುಪ್ಪಟ್ಟು ಹಣ ವಸೂಲಿ ಮಾಡಿವೆ: ವಿಜಯ್ ಮಲ್ಯ

Advertisements

“ಇದೀಗ ದಾಳಿಗೆ ಒಳಗಾಗಿರುವವನು ನಾನೇ. ಬ್ಯಾಂಕ್‌ಗಳು ನನಗೆ ಎಂದಿಗೂ ಬ್ಯಾಂಕ್ ಸ್ಟೇಟ್‌ಮೆಂಟ್ ನೀಡದ ಕಾರಣ ನಾನು ನಿಮ್ಮಂತೆಯೇ ಗೊಂದಲಕ್ಕೆ ಒಳಗಾಗಿದ್ದೇನೆ. ಇದು ತುಂಬಾ ವಿಚಿತ್ರ” ಎಂದು ಹೇಳಿದ್ದಾರೆ.

2016ರ ಮಾರ್ಚ್‌ನಲ್ಲಿ ಯುಕೆಗೆ ಪಲಾಯನವಾದ ಮಲ್ಯ ಒಡೆತನ ಕಿಂಗ್‌ಫಿಷರ್ ಏರ್‌ಲೈನ್ಸ್ (ಕೆಎಫ್‌ಎ) ಹಲವು ಬ್ಯಾಂಕುಗಳಿಗೆ 9,000 ಕೋಟಿ ರೂ.ಗಳ ಸಾಲ ಮರುಪಾವತಿ ಬಾಕಿ ಉಳಿಸಿತ್ತು. ಬ್ಯಾಂಕುಗಳಿಗೆ ಸಾಲ ಮರುಪಾವತಿಸದೆ ಮಲ್ಯ ಪರಾರಿಯಾಗಿದ್ದರು. ಆದರೆ ವಾರ್ಷಿಕ ಶೇಕಡ 11.5 ಬಡ್ಡಿದರದಲ್ಲಿ 6,203 ಕೋಟಿ ರೂ.ಗಳನ್ನು ವಸೂಲಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೆಂಗಳೂರಿನ ಡಿಆರ್‌ಟಿ ಪೀಠ 2017ರಲ್ಲಿ ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ ಆದೇಶಿಸಿತ್ತು.

ಈ ನಡುವೆ ಇಂದಿಗೂ ಭಾರತವು ಯುಕೆಯಿಂದ ಮಲ್ಯ ಅವರನ್ನು ಹಸ್ತಾಂತರಿಸಲು ಪ್ರಯತ್ನಿಸುತ್ತಿದೆ. ಇನ್ನು ತಾನು ಶೇಕಡ 100ರಷ್ಟು ಸಾಲ ಮರುಪಾವತಿಗೆ ಸಿದ್ಧನಾಗಿದ್ದೆ. ಆದರೆ ಬ್ಯಾಂಕುಗಳು ಮತ್ತು ಸರ್ಕಾರ ಬೇಡ ಎಂದಿದೆ ಎಂದು ಮಲ್ಯ ಇತ್ತೀಚೆಗೆ ಹೇಳಿಕೊಂಡಿದ್ದರು. ಅದಾದ ಬಳಿಕ ತನ್ನಿಂದ ಬ್ಯಾಂಕುಗಳು ಸುಮಾರು 14,000 ಕೋಟಿ ರೂಪಾಯಿ ವಸೂಲಿ ಮಾಡಿವೆ ಎಂದೂ ಹೇಳಿದ್ದರು. ಅದನ್ನೇ ಇದೀಗ ಮತ್ತೆ ಪುನರುಚ್ಚರಿಸಿದ್ದಾರೆ.

ಹಾಗೆಯೇ 2025ರ ಫೆಬ್ರವರಿ 5ರಂದು ವಿಜಯ್ ಮಲ್ಯ ಬ್ಯಾಂಕುಗಳ ಸಾಲ ವಸೂಲಾತಿ ಪ್ರಕ್ರಿಯೆಯ ಕುರಿತು ಸ್ಪಷ್ಟೀಕರಣವನ್ನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X