ವೀಸಾ ವಿಳಂಬ | ಪಾಕ್ ಯುವತಿ ಜೊತೆ ಆನ್‌ಲೈನ್‌ನಲ್ಲೇ ಮದುವೆಯಾದ ಬಿಜೆಪಿ ನಾಯಕನ ಪುತ್ರ

Date:

Advertisements

ಭಾರತ ಮತ್ತು ಪಾಕಿಸ್ತಾನದಲ್ಲಿ ನೆಲೆಸಿರುವ ಸಂಬಂಧಿಗಳ ನಡುವಿನ ವಿವಾಹ ನಿಶ್ಚಯವಾಗಿದ್ದರೂ, ವೀಸಾ ಸಿಗದ ಹಿನ್ನೆಲೆ ವರ ಪಾಕಿಸ್ತಾನಕ್ಕೆ ತೆರಳಲಾಗಿಲ್ಲ. ಹೀಗಾಗಿ, ಭಾರತದ ವರ ಮತ್ತು ಪಾಕಿಸ್ತಾನದ ವಧು ಆನ್‌ಲೈನ್‌ನಲ್ಲೇ ವಿವಾಹವಾಗಿರುವ ಅಪರೂಪದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಜೌನ್‌ಪುರದ ಬಿಜೆಪಿ ಕಾರ್ಪೋರೇಟರ್ ತೆಹಸಿನ್ ಶಾಹಿದ್ ಅವರ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಪಾಕಿಸ್ತಾನದ ಲಾಹೋರ್‌ನಲ್ಲಿ ನಲೆಸಿರುವ ಯುವತಿ ಅಂದಲೀಬ್ ಜಹಾರ ಅವರಿಗೆ ವಿವಾಹ ನಿಶ್ಚಯವಾಗಿತ್ತು.

ಮಧು ಅಂದಲೀಬ್ ಜಹಾರ ಅವರು ಬಿಜೆಪಿ ಕಾರ್ಪೋರೇಟರ್‌ ತೆಹಸಿನ್ ಶಾಹಿದ್ ಅವರ ಸಂಬಂಧಿಯೇ ಆಗಿದ್ದಾರೆ. ವಧುವಿನ ತಾಯಿ ರಾಣಾ ಯಾಸ್ಮಿನ್‌ ಜೈದಿ ಅವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರು ತಾವಿದ್ದಂತೆಯೇ ತಮ್ಮ ಮಗಳ ಮದುವೆ ಮಾಡಬೇಕೆಂಬ ಬಯಕೆ ಹೊಂದಿದ್ದರು. ಹೀಗಾಗಿ, ಶುಕ್ರವಾರ ವಿವಾಹ ನಿಶ್ಚಯಿಸಲಾಗಿತ್ತು.

Advertisements

ಆದರೆ, ಆದರೆ, ರಾಜತಾಂತ್ರಿಕ ಬಿಕ್ಕಟ್ಟುಗಳಂತಹ ಕಾರಣಗಳಿಂದಾಗಿ ವರನಿಗೆ ಪಾಕಿಸ್ತಾನಕ್ಕೆ ತೆರಳಲು ವೀಸಾ ಸಿಗುವುದು ತಡವಾಗಿದೆ. ಪರಿಣಾಮ ಇಬ್ಬರೂ ಅನ್‌ಲೈನ್‌ನಲ್ಲಿಯೇ ವಿವಾಹವಾಗಿದ್ದಾರೆ. ವಧು-ವರರ ಕುಟುಂಬಸ್ಥರು, ಸಂಬಂಧಿಗಳು ಆನ್‌ಲೈನ್‌ ಮೂಲಕವೇ ಇಬ್ಬರಿಗೂ ವಿವಾಹ ಮಾಡಿದ್ದಾರೆ. ಆನ್‌ಲೈನ್ ವಿವಾಹ ಸಮಾರಂಭಕ್ಕೆ ಜಿಲ್ಲೆಯ ಬಿಜೆಪಿ ನಾಯಕರೂ ಭಾಗಿದ್ದರು ಎಂದು ವರದಿಯಾಘಿದೆ.

ಪಾಕಿಸ್ತಾನ ಯುವತಿಯನ್ನು ವಿವಾಹವಾಗಿರುವ ಹೈದರ್‌, ತಮ್ಮ ಪತ್ನಿ ಭಾರತಕ್ಕೆ ಬರಲು ತ್ವರಿತವಾಗಿ ವೀಸಾ ಒದಗಿಸಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X