ವಕ್ಫ್‌ ಕಾಯ್ದೆ | ‘ವಕ್ಫ್ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುತ್ತಿದೆ’; ಢಾಕಾದಲ್ಲಿ ಪ್ರತಿಭಟನೆ

Date:

Advertisements

ಭಾರತದ ಕೇಂದ್ರ ಸರ್ಕಾರವು ‘ವಕ್ಫ್‌ ತಿದ್ದುಪಡಿ ಕಾಯ್ದೆ-2025’ಅನ್ನು ಜಾರಿಗೊಳಿಸಿದೆ. ಈ ಮೂಲಕ, ಭಾರತದಾದ್ಯಂತ ವಕ್ಫ್‌ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುವ ಹುನ್ನಾರ ಹೊಂದಿದೆ. ಮುಸ್ಲಿಮರನ್ನು ದಮನ ಮಾಡಲು ಯತ್ನಿಸುತ್ತಿದೆ ಎಂದು ಬಾಂಗಾದೇಶದ ಮುಸ್ಲಿಂ ಸಂಘಟನೆಗಳು ಆರೋಪಿಸಿವೆ. ಕಾಯ್ದೆಯಲ್ಲಿ ಹಿಂಪಡೆದುಕೊಳ್ಳುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿವೆ.

ಬಾಂಗ್ಲಾ ರಾಜಧಾನಿ ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಬಲಪಂಥೀಯ ಇಸ್ಲಾಮಿಸ್ಟ್ ಪಕ್ಷ ‘ಖಿಲಾಫತ್ ಮಜ್ಲಿಸ್’ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ‘ಭಾರತದಲ್ಲಿ ಮುಸ್ಲಿಮರಿಗೆ ಸೇರಿದ ಭೂಮಿಯನ್ನು ಅತಿಕ್ರಮಿಸಲಾಗುತ್ತಿದೆ’ ಎಂದು ಆರೋಪಿಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಪಕ್ಷದ ಮುಖ್ಯಸ್ಥ ಮೌಲಾನಾ ಮಾಮುನುಲ್ ಹಕ್, “ಮುಸ್ಲಿಮರ ಖಾಸಗಿ ಮತ್ತು ವಕ್ಫ್ ಆಸ್ತಿಗಳನ್ನು ಅತಿಕ್ರಮಿಸಿಕೊಂಡು ಅಥವಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಅವರು (ಬಿಜೆಪಿ) ದೇವಾಲಯ ಕಟ್ಟುತ್ತಿದ್ದಾರೆ. ಈ ಅತಿಕ್ರಮಣ ಮತ್ತು ಸ್ವಾಧೀನಗಳಿಗೆ ಕಾನೂನು ಚೌಕಟ್ಟನ್ನು ನೀಡಲು ವಕ್ಫ್ ತಿದ್ದುಪಡಿ ಕಾಯ್ದೆ-2025ಯನ್ನು ಅಂಗೀಕರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ವಕ್ಫ್‌ ತಿದ್ದುಪಡಿ ಕಾಯ್ದೆ | ಮೂಗಿಗೆ ತುಪ್ಪ ಹಚ್ಚಲು ಮನೆ ಬಾಗಿಲಿಗೆ ಬರುತ್ತಿದೆ ಬಿಜೆಪಿ!

“ಹಿಂದುತ್ವವಾದಿ ಬಿಜೆಪಿ ಸರ್ಕಾರವು ಭಾರತದಾದ್ಯಂತ ಹಿಂದಿನಿಂದಲೂ ಮುಸ್ಲಿಮರನ್ನು ಕೊಲ್ಲುತ್ತಿದೆ. ಅವರು ಮುಸ್ಲಿಮರ ಮೇಲೆ ದಾಳಿ ಮಾಡಲು ಹಿಂದುತ್ವವಾದಿಗಳನ್ನು ಪ್ರಚೋದಿಸುತ್ತಿದ್ದಾರೆ” ಎಂದು ದೂರಿದ್ದಾರೆ.

“ಭಾರತದಾದ್ಯಂತ ಕಾಯ್ದೆಯ ವಿರುದ್ಧ ಮುಸ್ಲಿಮರು ಪ್ರತಿಭಟನೆಯಲ್ಲಿ ಸಿಡಿದಿದ್ದಾರೆ. ಕಾಯ್ದೆಯು ಮುಸ್ಲಿಮರ ಧಾರ್ಮಿಕ ಕಾನೂನುಗಳು ಮತ್ತು ಹಕ್ಕುಗಳ ಮೇಲೆ ಹಸ್ತಕ್ಷೇಪ ಮಾಡುತ್ತದೆ. ಭಾರತದಲ್ಲಿ ಮುಸ್ಲಿಮರ ಹತ್ಯೆ ಮತ್ತು ಮುಸ್ಲಿಮರ ಧಾರ್ಮಿಕ ಭಾವನೆಗೆಳಿಗೆ ಧಕ್ಕೆ ತರಲು ಯತ್ನಿಸುತ್ತಿರುವ ಭಾರತದ ಸರ್ಕಾರ ವಿರುದ್ಧ ಮುಸ್ಲಿಂ ಜಗತ್ತು ಧ್ವನಿ ಎತ್ತಬೇಕು” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X