ಭಾರತದ 7 ಕೆಮ್ಮಿನ ಸಿರಪ್‌ಗಳು ವಿಷಪೂರಿತ ಎಂದ ವಿಶ್ವ ಆರೋಗ್ಯ ಸಂಸ್ಥೆ

Date:

Advertisements

ವಿಶ್ವದಾದ್ಯಂತ 300ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಭಾರತದ ಹರ್ಯಾಣ ಮತ್ತು ಪಂಜಾಬಿನಲ್ಲಿ ತಯಾರಾಗುತ್ತಿರುವ 7 ಕೆಮ್ಮಿನ ಸಿರಪ್‌ಗಳು ವಿಷಪೂರಿತವಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಸಿರಪ್‌ಗಳನ್ನು ಹರಿಯಾಣ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್, ಮರಿಯನ್ ಬಯೋಟೆಕ್ ಮತ್ತು ಕ್ಯೂಪಿ ಫಾರ್ಮಾ ಕಂಪನಿಗಳು ಹಾಗೂ ಪಂಜಾಬಿನ ಫರ್ಮಾಂಚೆ ಸಂಸ್ಥೆ ತಯಾರಿಸುತ್ತಿವೆ. ವಿಷಪೂರಿತವಾಗಿವೆ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದ ವಿಶ್ವ ಆರೋಗ್ಯ ಸಂಸ್ಥೆ, ತನಿಖೆಯನ್ನು ಸಂಪೂರ್ಣಗೊಳಿಸಿದ ನಂತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಭಾರತ ಹಾಗೂ ಇಂಡೋನೇಷ್ಯಗಳಲ್ಲಿರುವ 15 ವಿವಿಧ ಕಂಪನಿಗಳು ಉತ್ಪಾದಿಸುತ್ತಿರುವ 20 ಉತ್ಪನ್ನಗಳು ವಿಷಪೂರಿತವಾಗಿದ್ದು ವಿಶ್ವದಾದ್ಯಂತ ಹಲವು ದೇಶಗಳಲ್ಲಿ ಅತೀ ಹೆಚ್ಚು ಸಾವುನೋವುಗಳಿಗೆ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.         

Advertisements

ವಿಶ್ವ ಸಂಸ್ಥೆ ನೀಡಿರುವ ತನಿಖೆಯಲ್ಲಿ ಈ ಸಿರಪ್‌ಗಳಲ್ಲಿ ಹೆಚ್ಚಿನ ಮಟ್ಟದ ವಿಷಕಾರಿ ಅಂಶಗಳಾದ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾಗಿದೆ. ಇದು ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ನೂರಾರು ಸಾವುಗಳಿಗೆ ಕಾರಣವಾಗಿದೆ. 

ಈ ಸುದ್ದಿ ಓದಿದ್ದೀರಾ? ಮೊಬೈಲ್‌ ಕೊಡದೆ ಕಟ್ಟುನಿಟ್ಟು ಮಾಡಿದ್ದಕ್ಕೆ ತಾಯಿಯನ್ನೇ ಕೊಲ್ಲಲು ಹೊರಟ ಮಗಳು!

ಕೆಮ್ಮು ಸಿರಪ್ ಸೇವನೆಯ ನಂತರ ಆಫ್ರಿಕನ್ ದೇಶಗಳಲ್ಲಿ ಹಲವಾರು ಸಾವುಗಳು ವರದಿಯಾದ ನಂತರ ಭಾರತದಿಂದ ಗುಣಮಟ್ಟವಿಲ್ಲದ ಔಷಧಿಗಳ ಪೂರೈಕೆಯ ಬಗ್ಗೆ ವರದಿ ಬೆಳಕಿಗೆ ಬಂದಿತ್ತು. ಕಳೆದ ವರ್ಷ, ಭಾರತದಲ್ಲಿ ತಯಾರಿಸಿದ ಔಷಧಿಗಳು ಗ್ಯಾಂಬಿಯಾ ದೇಶದಲ್ಲಿ 60 ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾಯಿತು ಮತ್ತು ಉಜ್ಬೇಕಿಸ್ತಾನ್‌ನಲ್ಲಿ ಸುಮಾರು 20 ಮಕ್ಕಳು ಮೃತಪಟ್ಟಿದ್ದರು. 

ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಮತ್ತು ಗ್ಯಾಂಬಿಯಾದ ಆರೋಗ್ಯ ಅಧಿಕಾರಿಗಳು ನಡೆಸಿದ ಜಂಟಿ ತನಿಖೆಯು ಗ್ಯಾಂಬಿಯಾದಲ್ಲಿ ಅನೇಕ ಮಕ್ಕಳ ಸಾವು ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್‌ಗಳ ಸೇವನೆಯಿಂದ ಆಗಿದೆಯೆಂದು ದೃಢಪಡಿಸಿತ್ತು.

ಇತ್ತೀಚಿಗೆ ಮಧ್ಯ ಆಫ್ರಿಕಾದ ರಾಷ್ಟ್ರ ಕ್ಯಾಮರೂನ್‌ನಲ್ಲೂ ಕೂಡ ವಿಷಪೂರಿತ ಕೆಮ್ಮು ಸಿರಪ್‌ಗಳಿಂದ ಹನ್ನೆರಡು ಮಕ್ಕಳು ಸಾವಿಗೀಡಾಗಿದ್ದರು. ಇದಕ್ಕೆ ಭಾರತದ ಇಂದೂರ್‌ ಮೂಲದ ರೀಮನ್ ಲ್ಯಾಬ್ಸ್ ಪ್ರೈ.ಲಿ. ಔಷಧ ಸಂಸ್ಥೆ ಕಾರಣವಿರಬಹುದು ಎಂದು ಅಧಿಕಾರಿಗಳು ಸಂದೇಹ ವ್ಯಕ್ತಪಡಿಸಿದ್ದರು. ಆದರೆ ರೀಮನ್ ಲ್ಯಾಬ್ಸ್ ಸಂಸ್ಥೆಯ ಅಧಿಕಾರಿಗಳು, ’ತಾವು ಕಟ್ಟುನಿಟ್ಟಾದ ಗುಣಮಟ್ಟದ ನಿಯಂತ್ರಣಗಳನ್ನು ಅನುಸರಿಸುತ್ತಿದ್ದು, ಕಳಂಕಿತ ಔಷಧವನ್ನು ತಯಾರಿಸುವ ಯಾವುದೇ ಸಾಧ್ಯತೆಯಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X