ನಮ್ಮ ಮೇಲೆ ದಾಳಿ ಮಾಡಿದರೆ ಅಣ್ವಸ್ತ್ರ ಪ್ರಯೋಗಿಸುತ್ತೇವೆ: ಭಾರತಕ್ಕೆ ಪಾಕ್‌ ರಾಯಭಾರಿ ಎಚ್ಚರಿಕೆ

Date:

ಪೆಹಲ್ಗಾಮ್‌ ಉಗ್ರರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ವ ವಾತಾವರಣ ನಿರ್ಮಾಣವಾಗಿರುವ ಸಂದರ್ಭದಲ್ಲೆ ಪಾಕ್‌ನ ರಾಯಭಾರಿಯೊಬ್ಬರು ಭಾರತದ ಮೇಲೆ ಅಣ್ವಸ್ತ್ರ ದಾಳಿ ಪ್ರಯೋಗಿಸುವುದಾಗಿ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಮಾಸ್ಕೋದಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ರಷ್ಯಾದ ಪಾಕ್‌ ರಾಯಭಾರಿಯಾಗಿರುವ ಮೊಹಮ್ಮದ್‌ ಖಾಲೀದ್‌ ಜಮಾಲಿ, ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುತ್ತವೆ ಎಂದು ಕೆಲವೊಂದು ಸೋರಿಕೆಯಾದ ದಾಖಲೆಗಳು ಹೇಳುತ್ತವೆ. ಭಾರತ ದಾಳಿ ಮಾಡುವುದು ಸನ್ನಿಹಿತವಾಗಿದೆ. ಉನ್ಮಾದದಲ್ಲಿರುವ ಭಾರತದ ಮಾಧ್ಯಮಗಳ ವರದಿ ಹಾಗೂ ಬೇಜವಾಬ್ದಾರಿ ಹೇಳಿಕೆಗಳು ನಮ್ಮನ್ನು ಈ ರೀತಿ ಹೇಳಿಕೆ ನೀಡುವಂತೆ ಒತ್ತಾಯಿಸಿವೆ. ಪಾಕಿಸ್ತಾನದ ಕೆಲವು ಪ್ರದೇಶದ ಮೇಲೆ ದಾಳಿ ನಡೆಯುವುದಾಗಿ ಕೆಲವೊಂದು ದಾಖಲೆಗಳು ಹೇಳುತ್ತವೆ. ಹಾಗಾಗಿ ನಮ್ಮ ಮೇಲೆ ದಾಳಿ ನಡೆಯುವುದು ಸನ್ನಿಹಿತವಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಭಾರತ ಹಾಗೂ ಪಾಕಿಸ್ತಾನದ ವಿಷಯ ಬಂದರೆ ನಾವು ಸಂಖ್ಯಾಬಲದ ಮೇಲೆ ಚರ್ಚೆಯಲ್ಲಿ ಭಾಗಿಯಾಗಲು ಬಯಸುವುದಿಲ್ಲ. ಆದರೆ ನಾವು ಸಾಂಪ್ರದಾಯಿಕ ಹಾಗೂ ಅಣ್ವಸ್ತ್ರ ಒಳಗೊಂಡು ಎಲ್ಲ ರೀತಿಯ ಶಕ್ತಿಯನ್ನು ಬಳಸುತ್ತೇವೆ. ಪಾಕ್‌ ಜನರ ಬೆಂಬಲದೊಂದಿಗೆ ನಮ್ಮ ಸೇನೆ ಎಲ್ಲ ರೀತಿಯ ಶಕ್ತಿಯನ್ನು ಬಳಸುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ಮಾಡಿದ ನಂತರ ಪಾಕಿಸ್ತಾನವು ಭಾರತದ ಪ್ರತೀಕಾರದ ಭಯದಲ್ಲಿದೆ. ಇದಕ್ಕೂ ಮೊದಲು, ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆಯೊಡ್ಡಿದ್ದರು. ಘೋರಿ, ಶಾಹೀನ್ ಮತ್ತು ಘಜ್ನಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ ಪಾಕಿಸ್ತಾನದ ಶಸ್ತ್ರಾಗಾರವನ್ನು ಭಾರತಕ್ಕಾಗಿ ಮಾತ್ರ ಇಡಲಾಗಿದೆ ಎಂದು ಎಚ್ಚರಿಸಿದ್ದರು.

ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ಮೂಲಕ ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ಭಾರತ ಧೈರ್ಯ ಮಾಡಿದರೆ, ಅದು ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು ಎಂದು ಅಬ್ಬಾಸಿ ಹೇಳಿದ್ದರು.

ಪಾಕಿಸ್ತಾನದ ಮತ್ತೊಬ್ಬ ಸಚಿವ ಅತಾವುಲ್ಲಾ ತರಾರ್, ತಮ್ಮ ದೇಶಕ್ಕೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ದೊರಕಿದ್ದು ಮುಂದಿನ 24 ರಿಂದ 36 ಗಂಟೆಗಳಲ್ಲಿ ಭಾರತ ಮಿಲಿಟರಿ ದಾಳಿ ನಡೆಸಬಹುದು ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಂತರ ಚುನಾವಣೆ ಮುಗಿದ ತಕ್ಷಣ ಇರಾನ್ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್

ಇರಾನ್ ಹಾಗೂ ಅಮೆರಿಕ ನಡುವಿನ ಯುದ್ಧವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ,...

AI ಔಷಧಿ ವಯಸ್ಸಾಗುವಿಕೆಯನ್ನು ನಿಧಾನಗೊಳಿಸಬಲ್ಲದು: ಅಧ್ಯಯನ ವರದಿ

AI ನೆರವಿನಿಂದ ಅಭಿವೃದ್ಧಿಪಡಿಸಲಾದ ಔಷಧವೊಂದು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ...

160 ವರ್ಷ ಹಳೆಯ ಚರ್ಚ್‌ಗೆ ಮರುಜೀವ; ಎರಡು ತೆರವು ಆದೇಶ ಎದುರಿಸಿದ್ದ ಕಟ್ಟಡದ ಪುನಶ್ಚೇತನಕ್ಕೆ ಕೋರ್ಟ್‌ ಅನುಮತಿ

ಅಮೆರಿಕದ ಸೇಂಟ್‌ ಲೂಯಿಸ್‌ನ ಐತಿಹಾಸಿಕ ಸೋಲಾರ್ಡ್‌ ಪ್ರದೇಶದಲ್ಲಿರುವ 160 ವರ್ಷ ಹಳೆಯ...

ಗುಜರಾತ್ ಗಲಭೆಯಲ್ಲಿ ಮೋದಿ ದೋಷಮುಕ್ತರಾದ ಬಗ್ಗೆ ರಶ್ದಿ ಪ್ರಶ್ನೆ; ಅಮೆರಿಕದಲ್ಲಿ ಆರ್.ಎಸ್.ಎಸ್ ಪ್ರಭಾವಕ್ಕೆ ಕಳವಳ

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ...